ಗಡಿ ದಾಟಲು ನೆಗೆಟಿವ್ ವರದಿ ಕಡ್ಡಾಯ ಆದೇಶ : ರಾಜ್ಯ ಸರ್ಕಾರ, ದ.ಕ. ಡಿಸಿಗೆ ಕೇರಳ ಹೈಕೋರ್ಟ್ ನೋಟಿಸ್

Prasthutha|

ಬೆಂಗಳೂರು : ಕರ್ನಾಟಕ-ಕೇರಳ ಮಧ್ಯೆ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ.

- Advertisement -


ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕೇಂದ್ರ ಆರೋಗ್ಯ ಸಚಿವಾಲಯದ ಪ್ರತಿನಿಧಿಗಳಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದ್ದು, ಹೈಕೋರ್ಟ್ ಗೆ ಆಗಸ್ಟ್ 17 ರಂದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.


ಕರ್ನಾಟಕ-ಕೇರಳ ನಡುವಿನ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡುವಂತೆ ಕೇರಳದ ಸಿಪಿಎಂ ಮುಖಂಡ ದಯಾನಂದ್ ಎಂಬುವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಕರ್ನಾಟಕ ಸರ್ಕಾರ, ಕೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

Join Whatsapp