ಕೇರಳ: ಮೋದಿ ರೋಡ್ ಶೋನಲ್ಲಿ ಮುಸ್ಲಿಂ ಅಭ್ಯರ್ಥಿಯ ಕಡೆಗಣನೆ

Prasthutha|

ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ರೋಡ್ ಶೊನಲ್ಲಿ ರಾಜ್ಯದ ಏಕೈಕ ಮುಸ್ಲಿಂ ಅಭ್ಯರ್ಥಿಯನ್ನು ಕಡೆಗಣಿಸಿದ್ದು ರಾಜಕೀಯ ಜಗಳಕ್ಕೆ ಕಾರಣವಾಗಿದೆ.

- Advertisement -

ಪಾಲಕ್ಕಾಡ್ನಲ್ಲಿ ಮಂಗಳವಾರ ನರೇಂದ್ರ ಮೋದಿಯವರು ನಡೆಸಿದ ರೋಡ್ ಶೋ ವಾಹನದಲ್ಲಿ, ಪಾಲಕ್ಕಾಡ್ ಹಾಗೂ ಪಕ್ಕದ ಪೊನ್ನಾನಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಇದ್ದರು. ಆದರೆ ಮಲಪ್ಪುರದ ಬಿಜೆಪಿ ಅಭ್ಯರ್ಥಿ ಅಬ್ದುಲ್ ಸಲಾಮ್ ಅವರು ಇರಲಿಲ್ಲ. ಈ ಬಗ್ಗೆ ಸಿಪಿಎಂ ಹಿರಿಯ ನಾಯಕ ಎ.ಕೆ ಬಾಲನ್ ಹೇಳಿಕೆ ನೀಡಿದ್ದು, ‘ಮೋದಿಯವರ ರೋಡ್ ಶೋನಲ್ಲಿ ಅಬ್ದುಲ್ ಸಲಾಮ್ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗಿದೆ. ಇದು ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿಗೆ ಇರುವ ಧೋರಣೆಯ ಪ್ರತಿಬಿಂಬ’ ಎಂದು ಹೇಳಿದ್ದಾರೆ.

Join Whatsapp
Exit mobile version