ಕೇರಳದಲ್ಲಿ ಬಾಂಬ್ ಸ್ಫೋಟ: RSS ಕಾರ್ಯಕರ್ತನಿಗೆ ಗಾಯ

Prasthutha|

ಕಣ್ಣೂರು: ಶನಿವಾರ ತಡರಾತ್ರಿ ಕಂಟ್ರಿ ಬಾಂಬ್ ಸ್ಫೋಟಗೊಂಡ ಪರಿಣಾಮ ಆರೆಸ್ಸೆಸ್ ಕಾರ್ಯಕರ್ತನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

2016ರಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತ ಧನರಾಜ್ ಹತ್ಯೆ ಪ್ರಕರಣದ ಆರೋಪಿ ಬಿಜು (40) ಶನಿವಾರ ತಡರಾತ್ರಿ ನಡೆದ ಘಟನೆಯಲ್ಲಿ ತನ್ನ ಎರಡು ಬೆರಳುಗಳನ್ನು ಕಳೆದುಕೊಂಡಿದ್ದಾನೆ .ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ

ಬಿಜು ಮನೆ ಬಳಿಯೇ ಸ್ಫೋಟ ಸಂಭವಿಸಿದೆ. ಬಾಂಬ್ ತಯಾರಿಕೆ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆಯೇ ಅಥವಾ ಬೇರೆ ಕಾರಣದಿಂದ ಸ್ಫೋಟವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ತಂಡವು ಸ್ಫೋಟದ ತನಿಖೆಯನ್ನು ಪ್ರಾರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಬಿಜು ಪ್ರಸ್ತುತ ಮಲಬಾರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp