ಕೇರಳ SDPI ನಾಯಕ ಕೆ.ಎಸ್.ಶಾನ್ ಹತ್ಯೆ ಪ್ರಕರಣ | ಇಬ್ಬರು ಆರೆಸ್ಸೆಸ್ ಕಾರ್ಯಕರ್ತರ ಬಂಧನ

Prasthutha|

ಕೇರಳ: ಅಲಪ್ಪುಳ ಜಿಲ್ಲೆಯಲ್ಲಿ ಶನಿವಾರ ದುಷ್ಕರ್ಮಿಗಳಿಂದ ಕ್ರೂರವಾಗಿ ಹತ್ಯೆಗೈಯಲ್ಪಟ್ಟ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ನಾಯಕ ಕೆ.ಎಸ್.ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಾಲಾ ಪೊಲೀಸರು ಇಬ್ಬರನ್ನು ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -

ಇಬ್ಬರು ಆರೋಪಿಗಳನ್ನು ರತೇಶ್ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಆರೆಸ್ಸಿಸ್ಸಿನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಸಖರೆ ತಿಳಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಒಟ್ಟಾರೆಯಾಗಿ, 12 ಮಂದಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ.

“ಅಪರಾಧವೆಸಗಳು ಸಂಘಟಿಸಿದ ಸೂತ್ರಧಾರಿ ವ್ಯಕ್ತಿಯನ್ನು ಈಗಾಗಲೇ ಬಂಧಿಸಿದ್ದೇವೆ ಹಾಗೂ ಇದರಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಗುರುತಿಸಿದ್ದೇವೆ. ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು. ಅಲ್ಲದೇ ಈ ಪ್ರಕರಣದಲ್ಲಿ ಏನಾದರೂ ದೊಡ್ಡ ಪಿತೂರಿ ಇದೆಯೇ ಎನ್ನುವುದನ್ನೂ ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಎಡಿಜಿಪಿ ವಿಜಯ್ ಸಖರೆ ಹೇಳಿದ್ದಾರೆ.

Join Whatsapp