Home ಟಾಪ್ ಸುದ್ದಿಗಳು ಕೇರಳದ ವಿದ್ಯಾರ್ಥಿನಿಯ ವರದಕ್ಷಿಣೆ ಸಾವಿನ ಪ್ರಕರಣ: ಪತಿಗೆ 10 ವರ್ಷ ಜೈಲು ಶಿಕ್ಷೆ

ಕೇರಳದ ವಿದ್ಯಾರ್ಥಿನಿಯ ವರದಕ್ಷಿಣೆ ಸಾವಿನ ಪ್ರಕರಣ: ಪತಿಗೆ 10 ವರ್ಷ ಜೈಲು ಶಿಕ್ಷೆ

ಕೊಲ್ಲಂ: ಕಳೆದ ವರ್ಷ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ವದಕ್ಷಿಣೆ ಕಿರುಕುಳಕ್ಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ ನಾಯರ್ ರ ಪತಿಗೆ ಇಂದು 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೊಲ್ಲಂ ನ್ಯಾಯಾಲಯವು ವಿಸ್ಮಯಾ ಅವರ  ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಪ್ರಕರಣಕ್ಕಾಗಿ ಕಿರಣ್ ಕುಮಾರ್‌ ಅಪರಾಧಿ ಎಂದು ಸೋಮವಾರ ತೀರ್ಪು ನೀಡಿದ್ದು, ಇದೀಗ 10 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಲಾಗಿದೆ.

“ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ” ಎಂದು ನ್ಯಾಯಾಲಯ ಹೇಳಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಜಿತ್ ಕೆಎನ್ ರವರು,  ಕಿರಣ್ ಕುಮಾರ್ ನನ್ನು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ) ಮತ್ತು ಭಾರತೀಯ ದಂಡ ಸಂಹಿತೆಯ 304-ಬಿ (ವರದಕ್ಷಿಣೆ ಸಾವು) ಪ್ರಕರಣಗಳಡಿಯಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ.

 ಅಪರಾಧಿಗೆ ಮರಣದಂಡನೆ ವಿಧಿಸುವಂತೆ ನಾವು ನ್ಯಾಯಾಲಯದಲ್ಲಿ ಮನವಿ ಮಾಡುತ್ತೇವೆ  ಎಂದು ವಿಸ್ಮಯಾ ಪೋಷಕರ ಪರ ವಕೀಲರು ಹೇಳಿಕೆ ನೀಡಿದ್ದರು.

Join Whatsapp
Exit mobile version