ಅ.26 ಕ್ಕೆ ಖರ್ಗೆ ಪ್ರಮಾಣ ವಚನ ಸ್ವೀಕಾರ: ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ನಿರೀಕ್ಷೆ

Prasthutha|

►ಭಾರತ್ ಜೋಡೋ ಆರಂಭಿಸಿದ ಬಳಿಕ ಮೊದಲ ಬಾರಿಗೆ ದೆಹಲಿ ಭೇಟಿ

- Advertisement -

ಹೈದರಾಬಾದ್: ಅಕ್ಟೋಬರ್ 26 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ತೆಲಂಗಾಣದಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೋ ಪಾದಯಾತ್ರೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 24 ಮತ್ತು 25 ರಂದು ರಾಹುಲ್ ಗಾಂಧಿಗೆ ಎರಡು ದಿನಗಳ ವಿರಾಮವನ್ನು ನಿರ್ಧರಿಸಲಾಗಿತ್ತು. ಅವರು ಅಕ್ಟೋಬರ್ 23 ರಂದು ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ರವರೆಗೆ ತೆಲಂಗಾಣವನ್ನು ಪ್ರವೇಶಿಸಲಿದ್ದಾರೆ ಮತ್ತು ದಿನದ ಮೊದಲಾರ್ಧದಲ್ಲಿ ತಮ್ಮ ಭಾರತ್ ಜೋಡೋ ಪಾದಯಾತ್ರೆಯನ್ನು ಮುಂದುವರಿಸಲಿದ್ದಾರೆ.

- Advertisement -

ಆದರೆ ಅಕ್ಟೋಬರ್ 26 ರಂದು ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಅವರು ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 26 ಅನ್ನು ಸಹ ವಿರಾಮ ದಿನವನ್ನಾಗಿ ಸೇರಿಸಲಾಗಿದ್ದು, ಖರ್ಗೆ ಪ್ರಮಾಣ ವಚನ ಸ್ವೀಕಾರಕ್ಕೆ ರಾಹುಲ್ ತೆರಳಲಿದ್ದಾರೆ ಎಂಬ ಮಾಹಿತಿ ದೊರಕಿದೆ.

ಅಕ್ಟೋಬರ್ 28ರಿಂದ ತೆಲಂಗಾಣದಲ್ಲಿ ಅವರ ಪಾದಯಾತ್ರೆ ಪುನರಾರಂಭಗೊಳ್ಳಲಿದೆ.

Join Whatsapp