ಖರ್ಗೆ ಪದಗ್ರಹಣ ಹಿನ್ನೆಲೆ : ರಾಜ್ಯದ ಎರಡು ಕಡೆ ಬೃಹತ್ ಅಭಿನಂದನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ತಯಾರಿ

Prasthutha|

ಬೆಂಗಳೂರು: ನೂತನ ರಾಷ್ಟ್ರೀಯ ಕಾಂಗ್ರೆಸ್ ಇದರ ಅಧ್ಯಕ್ಷರಾಗಿ ಚುನಾಯಿತರಾದ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ (26 ಅಕ್ಟೋಬರ್) ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ರಾಜ್ಯದ ಎರಡು ಕಡೆ ಬೃಹತ್ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತಯಾರಿಗೊಳಿಸುತ್ತಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಬೆಂಗಳೂರು ಮತ್ತು ಕಲಬುರ್ಗಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ. ಈ ಅಭಿನಂದನಾ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರ ಐಕ್ಯತೆಯನ್ನು ಪ್ರದರ್ಶನಗೊಳಿಸಲಿಕ್ಕಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ

Join Whatsapp