ಪ್ರಮೋದ್ ಮುತಾಲಿಕನ್ನು ಒದ್ದು ಒಳಗೆ ಹಾಕಿ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Prasthutha|

- Advertisement -

ಬಾಗಲಕೋಟೆ : ರಾಜ್ಯದಲ್ಲಿ ಅಜಾನ್ ವಿರುದ್ಧ ಪರ್ಯಾಯವಾಗಿ ಶ್ರೀರಾಮಸೇನೆ ಸುಪ್ರಭಾತ ಅಭಿಯಾನ ಹಮ್ಮಿಕೊಂಡು ಸಮಾಜದಲ್ಲಿ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿದ್ದಾರೆ, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೊದಲು ಮುತಾಲಿಕ್ ರಂತವರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸೋದು ಕಷ್ಟವಾಗುತ್ತದೆ ಎಂದರು.

- Advertisement -

ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಕಿತ್ತು ಹಾಕಬೇಕು. ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ಬಿಡಬೇಕು. ಮೊದಲು ಮುತಾಲಿಕ್ ರಂತರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

Join Whatsapp