ಕರ್ನಾಟಕದಲ್ಲಿ ಹೆಣ್ಣುಮಕ್ಕಳ ಕೊಲೆ ನಡೆಯುತ್ತಿದೆ: ಪ್ರಧಾನಿ ಮೋದಿ

Prasthutha|

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹೀರೆಮಠ್ ಹತ್ಯೆ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿ ಕೋಮು ವಿಂಗಡನೆ ರಾಜಕೀಯ ಮಾಡುತ್ತಾ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ.

- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಹೆಣ್ಣುಮಕ್ಕಳ ಕೊಲೆ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುತ್ತಿದೆ. ಭಜನೆ, ಗೀರ್ತನೆ ಹಾಡಿದರೂ ಹಲ್ಲೆಯಾಗುತ್ತಿದೆ. ಇದು ಸಾಮಾನ್ಯ ಘಟನೆಯಲ್ಲ ಎಂದು ಹೇಳಿದ್ದಾರೆ.

ನೇಹಾ ಕೊಲೆ ಪ್ರಕರಣ, ರಾಮೇಶ್ವರಂ ಸ್ಫೋಟ ಪ್ರಕರಣ, ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಹಲ್ಲೆ, ರಾಮ ನವಮಿ ದಿನ ಶ್ರೀರಾಮನ ಬಾವುಟ ಹಾಕಿ ತೆರಳುತ್ತಿದ್ದ ಯುವಕರ ಮೇಲಿನ ಹಲ್ಲೆ ಪ್ರಕರಣವನ್ನು ಮೋದಿ ಹೆಸರೆತ್ತದೆ ಉಲ್ಲೇಖಿಸಿದ್ದಾರೆ.

- Advertisement -

ಈ ಘಟನೆಗಳು ಮರುಕಳಿಸುತ್ತಿರಲು ಕಾಂಗ್ರೆಸ್ ಕುಮ್ಮಕ್ಕು ಕಾರಣ ಎಂದು ಪರೋಕ್ಷವಾಗಿ ಹೇಳಿದ ಮೋದಿ, ಹೀಗಾಗದಿರಲು ಬಿಜೆಪಿಗೆ ಮತ ನೀಡಿ ಎಂದಿದ್ದಾರೆ.

Join Whatsapp