Home ಕರಾವಳಿ ಸುರತ್ಕಲ್ ಜಲೀಲ್ ಹತ್ಯೆ| ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೊಮ್ಮಾಯಿಗೆ ಮೊಯ್ದಿನ್ ಬಾವಾ ಮನವಿ

ಸುರತ್ಕಲ್ ಜಲೀಲ್ ಹತ್ಯೆ| ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೊಮ್ಮಾಯಿಗೆ ಮೊಯ್ದಿನ್ ಬಾವಾ ಮನವಿ

ಮಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಮೊಯ್ದಿನ್ ಬಾವ, ಜಲೀಲ್ ಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಿ ನ್ಯಾಯ ಒದಗಿಸಿಕೊಡಲು ಮನವಿ ಮಾಡಿದ್ದಾರೆ.  

ಮೂಡುಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ  ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.25ರ ಭಾನುವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಮೊಯ್ದಿನ್ ಬಾವಾ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Join Whatsapp
Exit mobile version