Home ಟಾಪ್ ಸುದ್ದಿಗಳು ಜೈಲಿನಲ್ಲಿ ಘರ್ಷಣೆ| ಸಿಧು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಹತ್ಯೆ

ಜೈಲಿನಲ್ಲಿ ಘರ್ಷಣೆ| ಸಿಧು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರಣ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿ ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಕೈದಿಗಳು ಹತ್ಯೆಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕೈದಿಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಆರೋಪಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಕೈದಿಗಳೂ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಾದ ದುರಾನ್ ಮಂದೀಪ್ ತೂಫಾನ್, ಮನಮೋಹನ್ ಸಿಂಗ್ ಮತ್ತು ಕೇಶವ್ ಅವರ ನಡುವೆ ಘರ್ಷಣೆ ನಡೆದಿದ್ದು, ಮಂದೀಪ್, ಮನಮೋಹನ್ ಸಿಂಗ್ ಸಾವನ್ನಪ್ಪಿದ್ದಾರೆ.

ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆರೋಪಿ ಕೇಶವ್‌‌ನನ್ನು ಪೊಲೀಸರು ಅಮೃತ್‌ಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂಸೆವಾಲಾ ಮೇ 29 ರಂದು ಮಾನ್ಸಾ ಜಿಲ್ಲೆಯಲ್ಲಿ ಹತ್ಯೆಯಾಗಿದ್ದರು.

Join Whatsapp
Exit mobile version