Home ಟಾಪ್ ಸುದ್ದಿಗಳು ವಿಕೃತ ವಿಶ್ವಗುರುವನ್ನು ಹೊಡೆದೋಡಿಸಬೇಕಿದೆ: ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ವಾಗ್ದಾಳಿ

ವಿಕೃತ ವಿಶ್ವಗುರುವನ್ನು ಹೊಡೆದೋಡಿಸಬೇಕಿದೆ: ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ವಾಗ್ದಾಳಿ

ಬೆಂಗಳೂರು: ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆ ಎಂದು ಬಹು ಭಾಷಾ ನಟ ಕಿಶೋರ್ ಕುಮಾರ್ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.


ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ವಿಶ್ವಗುರುಗಳಿದ್ದಾರೆ ಎಚ್ಚರ. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆʼʼ ಎಂದು ಕರೆ ಕೊಟ್ಟಿದ್ದಾರೆ.


ಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ..ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರʼʼ ಎಂದರು.


ಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ..ʼʼ ಎಂದು ಹೇಳಿದ್ದಾರೆ.


ಬನ್ನಿ ಒಂದಾಗುವ
ನಮ್ಮ ನಮ್ಮಲ್ಲಿ ಹೊಡೆದಾಡುವುದನ್ನು ಬಿಟ್ಟು
ನಾವೆಲ್ಲರೂ ಒಂದಾಗಿ ಹೊಡೆದೋಡಿಸಬೇಕಿದೆ
ಈ ವಿಕೃತ ವಿಶ್ವಗುರುಗಳನು
ಮತ್ತೆ ಮರಳಬೇಕಿದೆ
ಪ್ರೀತಿಯ ಶಾಂತಿಯ
ನಮ್ಮ ಭಾರತಕೆ

Join Whatsapp
Exit mobile version