ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯನ ಅಪಹರಣ: ಮೂವರ ವಿರುದ್ಧ ದೂರು

Prasthutha|

ಬೆಳಗಾವಿ: ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯ ನಾಗೇಶ್ ಅಸುಂಡಿ ಅಪಹರಣ ಪ್ರಕರಣ ಸಂಬಂಧ ಸ್ಥಳೀಯ ಕಾಂಗ್ರೆಸ್ ಶಾಸಕರ ಮೂವರು ಆಪ್ತರ ವಿರುದ್ಧ ದೂರು ದಾಖಲಾಗಿದೆ.

- Advertisement -


ನಾಗೇಶ್ ಅಪಹರಣ ಆದ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.


ತಡರಾತ್ರಿ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಚೌಕಿಮಠ ಕ್ರಾಸ್ ಬಳಿ ನಾಗೇಶ್ ಮೊಬೈಲ್ ನಲ್ಲಿ ಮಾತನಾಡುತ್ತ ನಿಂತಿದ್ದಾಗ ಅಪಹರಣ ಮಾಡಿದ್ದಾರೆ ಎನ್ನಲಾಗಿದೆ.

- Advertisement -


ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ನಾಗೇಶ್ ಅಸುಂಡಿ ತಂದೆ ಬಸವರಾಜ್ ಅಸುಂಡಿ ನೀಡಿದ ದೂರಿನ ಮೇರೆಗೆ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಆಪ್ತ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ್ ಕುದರೇಮನಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.



Join Whatsapp
Exit mobile version