ಕೊಡಗು ಬಜರಂಗದಳ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿಯ ವಿರುದ್ಧ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್

Prasthutha|

ಬೆಂಗಳೂರು: ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಟಿಟ್ವರ್ ನಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -

IllegalArmsTraing ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದ್ದು, ಆರೋಪಿಗಳನ್ನು ಬಂಧಿಸುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ವಿರೋಧ ಪಕ್ಷಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಣ ತಜ್ಞರು ಈಗಾಗಲೇ ಶಸ್ತ್ರಾಸ್ತ್ರ ತರಬೇತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ಬಿಜೆಪಿ ನಾಯಕರು ತರಬೇತಿಯನ್ನು ಸಮರ್ಥಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ.

ಟ್ವಿಟ್ಟರ್ ನಲ್ಲಿ ಆರ್ ಎಸ್ ಎಸ್ ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ವಿಷಯದಲ್ಲಿ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Join Whatsapp