ಕೊಡಗು: ರಾಜ್ಯ ಸರಕಾರದ ದಲಿತ ವಿರೋಧಿ ನೀತಿಯ ವಿರುದ್ಧ ಅರೆಬೆತ್ತಲೆ ಪ್ರತಿಭಟನೆ

Prasthutha|

ಮಡಿಕೇರಿ: ಜಿಲ್ಲೆಯಾದ್ಯಂತ ಅಮೃತ ಮಹೋತ್ಸವ ನಡೆಯುತ್ತಿರುವ ಹೊತ್ತಿನಲ್ಲೇ ರಾಜ್ಯ ಸರಕಾರದ ದಲಿತ ವಿರೋಧಿ ನೀತಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

- Advertisement -

ಪೊನ್ನಂಪೇಟೆ ಬಸವೇಶ್ವರ ದೇವಾಲಯದ ಮುಂಭಾಗದಿಂದ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಸದಸ್ಯರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ಪ್ರತಿಮೆಯ ಎದುರು ಜಮಾಯಿಸಿದ ಸದಸ್ಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸಿದರು.

Join Whatsapp