ಕೊಡಗು: ಮುಂದುವರಿದ ಮಳೆ ಆರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಮಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

- Advertisement -

ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರಿ ಹೆಚ್ಚಳವಾಗಿದ್ದು, ಜಲಾಶಯದಿಂದ 16 ಸಾವಿರ ಕ್ಯುಸೆಕ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.

ಕುಶಾಲನಗರದ ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಸಾಯಿ ಬಡಾವಣೆ, ಕುವೆಂಪು ಬಡಾವಣೆ ಸೇರಿ ಹಲವು ಬಡಾವಣೆಗಳು ಜಲಾವೃತವಾಗಿವೆ.

- Advertisement -

ಚೇರಳ ಶ್ರೀಮಂಗಲದಲ್ಲಿ ಹಾಗೂ ನೆಲ್ಯಹುದಿಕೇರಿ ಎಂ.ಜಿ ಕಾಲನಿಯಲ್ಲಿ ಭಾರಿ ಮಳೆಗೆ ಮನೆ ಕುಸಿದಿದೆ. ಜಿಲ್ಲೆಯ ವಿವಿಧೆಡೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಭಾಗಮಂಡಲ ವ್ಯಾಪ್ತಿಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದ್ದು, ಭಾಗಂಡಲ ತ್ರೀವೇಣಿ ಸಂಗಮ ಭರ್ತಿಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

Join Whatsapp