ಕೊಡಗು: ಜಿಲ್ಲೆಯಲ್ಲಿ ಭೀಕರ ಮಳೆ; ಸಂತ್ರಸ್ತರಿಗೆ 5 ಲಕ್ಷ ಪರಿಹಾರ : ಆರ್.ಅಶೋಕ್ ಘೋಷಣೆ

Prasthutha|

ಮಡಿಕೇರಿ: ಒಂದು ವಾರದಿಂದ ಮುಂದುವರಿದ ಮಹಾಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಲಾ 5 ಲಕ್ಷ ರೂ.  ಹಾಗೂ ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ರವರು ಘೋಷಿಸಿದ್ದಾರೆ.

- Advertisement -

ಸರಣಿ ಭೂಕಂಪನದ ಕೇಂದ್ರ ಬಿಂದುವಾದ  ಮಡಿಕೇರಿ ತಾಲೂಕಿನ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರೊಂದಿಗೆ ಚರ್ಚಿಸಿದ ಸಚಿವರು ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಹಾಗೂ ಧಾರಾಕಾರ ಮಳೆಯಿಂದ ಮನೆ ಸಂಪೂರ್ಣವಾಗಿ ಬಿದ್ದು ನಷ್ಟವಾಗಿದ್ದರೆ 5 ಲಕ್ಷ ರೂ. ಮತ್ತು ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ಪರಿಹಾರ ವಿತರಿಸಲು ಬೆಂಗಳೂರಿಗೆ ತಲುಪಿದ ತಕ್ಷಣ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

Join Whatsapp