ಕೊಡಗು: ವಿಧಾನ ಪರಿಷತ್ ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ

Prasthutha|

ಮಡಿಕೇರಿ: ವಿಧಾನ ಪರಿಷತ್ ಚುನಾವಣೆಗೆ ಕೊಡಗು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಅಭ್ಯರ್ಥಿ ಇಸಾಕ್ ಖಾನ್ ಅವರು ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದಾರೆ.

- Advertisement -

ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ಗೌಡ ಉಳಿದಿದ್ದು ಇಬ್ಬರ ನಡುವೆ ಪೈಪೋಟಿ ಏರ್ಪಟ್ಟಿದೆ.

ನಾಮಪತ್ರ ವಾಪಸ್ ಪಡೆಯುವ ಸಂಬಂಧ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಹಾಗೂ ಮುಖಂಡ ಎಚ್.ಎಸ್.ಚಂದ್ರಮೌಳಿ ಅವರು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.

- Advertisement -

ಕಣದಲ್ಲಿ ಉಳಿದರೆ ಬಿಜೆಪಿ ಅಭ್ಯರ್ಥಿಗೆ ಅನುಕೂಲ ಆಗುತ್ತಿತ್ತು. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ನಮ್ಮ ಕಾರ್ಯಕರ್ತರೂ ಟೀಕಿಸುತ್ತಿದ್ದರು. ಹೀಗಾಗಿ, ನಾಮಪತ್ರ ವಾಪಸ್ ಪಡೆದುಕೊಂಡೆ ಎಂದು ಇಸಾಕ್ ಖಾನ್ ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು ಎಂದೂ ಹೇಳಿದರು.

Join Whatsapp