ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

Prasthutha|

ಮೈಸೂರು: ಕೊಡಗು ಜಿಲ್ಲೆಯ ಕುಶಾಲನಗರದ ಕಾರ್ಯನಿರ್ವಾಹಕ ಇಂಜಿನಿಯರ್​ ಪಿ.ಅಶೋಕ್ ಕುಮಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

- Advertisement -

49 ಕಿಲೋ ವ್ಯಾಟ್​ ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಗಂಡ 2 ಲಕ್ಷ ರೂ ಹಣವನ್ನು ಮೈಸೂರಿನ ವಿಜಯನಗರ ನಿವಾಸದಲ್ಲಿ ಪಡೆಯುತ್ತಿದ್ದಾಗ ಎಇಇ ಅಶೋಕ್ ಕುಮಾರ್ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ SP ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, DySP ಪವನ್ ಕುಮಾರ್, ಇನ್ಸ್​​ಪೆಕ್ಟರ್​ ಲೋಕೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.

Join Whatsapp