Home ಟಾಪ್ ಸುದ್ದಿಗಳು ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಮಡಿಕೇರಿ: ಸಾಕಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಇಂದು ಬೆಳಿಗ್ಗೆ ದುಬಾರೆ ಹಾಡಿಯಲ್ಲಿ ನಡೆದಿದೆ.

ದುಬಾರೆ ಹಾಡಿ ನಿವಾಸಿ  ಬಸಪ್ಪ (28) ಮೃತ ದುರ್ದೈವಿ. ಮನೆಯಿಂದ ನಡೆದು ಹೋಗುತ್ತಿದ್ದ ವೇಳೆ ಸಾಕಾನೆ ದಾಳಿ ಮಾಡಿದೆ. ಈ ಸಂದರ್ಭ ಸ್ಥಳಕ್ಕೆ ತೆರಳಿದ ಮಾವುತನ ಮೇಲೂ ದಾಳಿ ಮಾಡಿದ್ದು, ಮಾವುತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಬಸಪ್ಪನನ್ನು ಉಪವಲಯ ಅರಣ್ಯಾಧಿಕಾರಿ ರಂಜನ್ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Join Whatsapp
Exit mobile version