Home ಟಾಪ್ ಸುದ್ದಿಗಳು ಕೊಡಗು: ಸಿದ್ದರಾಮಯ್ಯಗೆ ಅಪಮಾನ, ಪೊಲೀಸ್ ವೈಫಲ್ಯದ ವಿರುದ್ಧ ನಾಳೆ ಎಸ್.ಪಿ ಕಚೇರಿ ಮುಂದೆ ಪ್ರತಿಭಟನೆ

ಕೊಡಗು: ಸಿದ್ದರಾಮಯ್ಯಗೆ ಅಪಮಾನ, ಪೊಲೀಸ್ ವೈಫಲ್ಯದ ವಿರುದ್ಧ ನಾಳೆ ಎಸ್.ಪಿ ಕಚೇರಿ ಮುಂದೆ ಪ್ರತಿಭಟನೆ

ಮಡಿಕೇರಿ: ಮಳೆ ಹಾನಿ‌ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆಯನ್ನು ಖಂಡಿಸಿ ಹಾಗೂ ಕೊಡಗು ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ಧ ನಾಳೆ ಎಸ್.ಪಿ ಕಚೇರಿ ಮುಂದೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭ ಆಡಳಿತ ಪಕ್ಷ ಬಿಜೆಪಿಯ ಕೆಲವು ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರಜಾಪ್ರಭುತ್ವಕ್ಕೆ ವಿರೋಧ ರೀತಿಯಲ್ಲಿ ವರ್ತಿಸಿ, ಅಹಿತಕರವಾದ ವಾತಾವರಣವನ್ನು ಸೃಷ್ಟಿಸಿ ಪ್ರಜಾಪ್ರಭುತ್ವಕ್ಕೆ ಅಗೌರವದಿಂದ ನಡೆದುಕೊಂಡ ಆಡಳಿತ ಪಕ್ಷದ ಪುಂಡಾಟಿಕೆಯನ್ನು ನೋಡುತ್ತ, ಪರಿಸ್ಥಿತಿ ಹತೋಟಿ ಮೀರುತ್ತಿರುವಾಗ ಕೈಚೆಲ್ಲಿ ಕುಳಿತ ಪೊಲೀಸರ ಕ್ರಮದ ವಿರುದ್ಧವಾಗಿ ಹಾಗೂ ಸರಕಾರದ ವಿರುದ್ಧವಾಗಿ ನಾಳೆ ಮಡಿಕೇರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯೆದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಕಾಂಗ್ರೆಸ್ ಅಧ್ಯಕ್ಷ
ಧರ್ಮಜ ಉತ್ತಪ್ಪ ಮಾಹಿತಿ ನೀಡಿದ್ದಾರೆ.

Join Whatsapp
Exit mobile version