Home ಟಾಪ್ ಸುದ್ದಿಗಳು ಕೊಡಗು: ಮಳೆ ಹಾನಿ; ಸಂತ್ರಸ್ತರಿಗೆ ಚೆಕ್ ವಿತರಿಸಿದ ಸಿ ಎಂ ಬೊಮ್ಮಾಯಿ

ಕೊಡಗು: ಮಳೆ ಹಾನಿ; ಸಂತ್ರಸ್ತರಿಗೆ ಚೆಕ್ ವಿತರಿಸಿದ ಸಿ ಎಂ ಬೊಮ್ಮಾಯಿ

ಮಡಿಕೇರಿ: ಕಳೆದ 12 ದಿನಗಳಿಂದ ಧಾರಾಕಾರವಾಗಿ‌ ಸುರಿದ ಮಳೆಗೆ ಮನೆ ಕಳೆದುಕೊಂಡ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಗೋಪಾಲ ಅವರ ಮನೆಯನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವೀಕ್ಷಿಸಿದರು.

 ಗೋಪಾಲ ಕುಟುಂಬದವರಿಗೆ 95,100 ರೂ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.

Join Whatsapp
Exit mobile version