ಕೊಡಗು: ಹಿರಿಯ ಪತ್ರಕರ್ತ ನಿಧನ

Prasthutha|

ಮಡಿಕೇರಿ: ಜಿಲ್ಲೆಯ ಹಿರಿಯ ಪತ್ರಕರ್ತ ವಿರಾಜಪೇಟೆಯ ತೆಲುಗರ ಬೀದಿ ನಿವಾಸಿ ಡಿ.ಎಂ ರಾಜ್ ಕುಮಾರ್ (64) ನಿಧನರಾದರು.

- Advertisement -

ಶಕ್ತಿ ಪತ್ರಿಕೆಯ ಹಿರಿಯ ವರದಿಗಾರ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘ ಮತ್ತು ಕೊಡಗು ಪ್ರೆಸ್ ಕ್ಲಬ್ ಸದಸ್ಯರಾಗಿದ್ದ ಇವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ವಿರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಡಿ.ಎಂ ರಾಜ್ ಕುಮಾರ್ ನಿಧನಕ್ಕೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂತಾಪ ಸೂಚಿಸಿದೆ.

Join Whatsapp