ಕೊಡಗು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Prasthutha|

ಮಡಿಕೇರಿ:  ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿಯಲ್ಲಿ ನಡೆದಿದೆ.

- Advertisement -

ಮೃತ ವಿದ್ಯಾರ್ಥಿನಿಯನ್ನು ಹರ್ಷಿತಾ (16) ಎಂದು ಗುರುತಿಸಲಾಗಿದೆ. ತೋಟದ ಕಾರ್ಮಿಕರಾಗಿರುವ  ಅಣ್ಣು ಎಂಬವರ ಪುತ್ರಿ ಹರ್ಷಿತಾ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಶಾಲೆಗೆ ಹೋಗದೇ ಓದಿಕೊಳ್ಳಲೆಂದು ತೋಟದ ಮನೆಯಲ್ಲಿ ಉಳಿದುಕೊಂಡಿದ್ದಳು ಎನ್ನಲಾಗಿದೆ.

ಕೆಲಸಕ್ಕೆ ಹೋದ ಮನೆಯವರು ಸಂಜೆ ಹಿಂತಿರುಗಿ ಬಂದು ನೋಡಿದಾಗ ಮನೆಯೊಳಗೆ   ನೇಣು ಬಿಗಿದ ಸ್ಥಿತಿಯಲ್ಲಿ ಮಗಳ ಮೃತದೇಹ ಕಂಡುಬಂದಿದೆ.

- Advertisement -

ಈ ಬಗ್ಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.



Join Whatsapp