ಕೊಡಗು: ಗ್ಯಾಸ್ ಸಿಲಿಂಡರ್ ಸ್ಫೋಟ, ಮಗು ಸೇರಿ ಮೂವರು ಪ್ರಾಣಾಪಾಯದಿಂದ ಪಾರು

Prasthutha|

ಮಡಿಕೇರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಮಾಲ್ದಾರೆಯಲ್ಲಿ ನಡೆದಿದೆ.

- Advertisement -

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನತಾ ಕಾಲೋನಿ ನಿವಾಸಿ ಮಾಲ್ದಾರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರಾಣಿ ಅವರ ಮನೆಯಲ್ಲಿ ಘಟನೆ ನಡೆದಿದೆ.

ರಾಣಿ ಹಾಗೂ ಅವರ ಸೊಸೆ ರಮ್ಯ ಮತ್ತು ಮೂರು ವರ್ಷದ ಮಗು ಮನೆಯಲ್ಲಿದ್ದರು, ಮಧ್ಯಾಹ್ನ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸೋರಿಕೆಯಾಗುವುದನ್ನು ಗಮನಿಸಿದ ರಮ್ಯ ಕೂಡಲೇ ರಾಣಿ ಅವರಿಗೆ ವಿಷಯ ತಿಳಿಸಿ ಮೂರು ಮಂದಿ ಮನೆಯಿಂದ ಹೊರಗೆ ಓಡಿ ಹೋಗಿದ್ದಾರೆ.

- Advertisement -

ಈ ಸಂದರ್ಭ ಸಿಲಿಂಡರ್ ಸ್ಫೋಟಗೊಂಡಿದೆ. ರಮ್ಯ ಅವರು ತಕ್ಷಣ ಎಚ್ಚೆತ್ತುಕೊಂಡಿದ್ದರಿಂದ ಅನಾಹುತ ತಪ್ಪಿದೆ. ಸಿಲಿಂಡರ್ ಸ್ಫೋಟಕ್ಕೆ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಮನೆ ಸಂಪೂರ್ಣ ಹಾನಿಯಾಗಿದೆ.

Join Whatsapp