ಕೊಡಗು: ಆನೆ ದಂತ ಮಾರಾಟ ಯತ್ನ, ಇಬ್ಬರ ಬಂಧನ

Prasthutha|

ಮಡಿಕೇರಿ: ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ತಂಡ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

- Advertisement -

ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆರೋಪಿಗಳನ್ನು ಬಂಧಿಸಿದರು.

ಪಿ. ಆಶಿತ್ ಮತ್ತು ಸುಭಾಷ್ ಬಂಧಿತರು. ಬಂಧಿತರಿಂದ ಒಂದು ಆನೆದಂತವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Join Whatsapp