ಕೊಡಗು: ಬಿಜೆಪಿ ಮುಖಂಡರಿಂದ ಮಾರಕಾಸ್ತ್ರಗಳಿಂದ ಹಲ್ಲೆ, ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಗಂಭೀರ

Prasthutha|

ಮಡಿಕೇರಿ: ಬಿಜೆಪಿ ಮುಖಂಡರಾದ ಮೂವರು ಸಹೋದರರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಪರಿಣಾಮ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ತಾಲೂಕಿನ ಅರೆಕಾಡು ಸಮೀಪದ ಟೀ ಅಂಗಡಿಯೊಂದರಲ್ಲಿ ನಡೆದಿದೆ.

- Advertisement -

ಗ್ರಾಮ ಪಂಚಾಯತಿ ಮಾಜಿ ಸದಸ್ಯ ಜಯಣ್ಣ ಎಂಬವರ ಸಹೋದರಿ ಲಕ್ಷ್ಮಿ ಎಂಬವರು ನಿನ್ನೆ ನಿಧನ ಹೊಂದಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಯಶ್ವಂತ್ ಹಾಗೂ ಕೋಶಾಧಿಕಾರಿ ಚಂದನ್ ಅಪ್ಪಯ್ಯ ಎಂಬವರು ಮೃತರ ಅಂತಿಮ ದರ್ಶನ ಪಡೆದು ಸಮೀಪದ ಟೀ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಬಿಜೆಪಿ ಮುಖಂಡರಾದ ಮೂವರು ಸಹೋದರರಾದ ಅರೆಕಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಭು ಶೇಖರ್ ಹಾಗೂ ಸಹೋದರರಾದ ಅಪ್ರು ರವೀಂದ್ರ ಮತ್ತು ಆನಂದ್ ರಘು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಇಬ್ಬರಿಗೆ ಸಿದ್ದಾಪುರ ಸಮುದಾಯ ಆರೋಗ್ಯ ಕೆಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಕೂಡಾ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

Join Whatsapp