ಕೊಡಗು: ಮುಂದುವರಿದ ವರುಣಾರ್ಭಟ; ಭಾರಿ ಮಳೆಗೆ ಉರುಳಿ ಬಿದ್ದ ಬಂಡೆ

Prasthutha|

ಕೊಡಗು:  ಜಿಲ್ಲೆಯಾದ್ಯಂತ ನಿರಂತರ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲದಿಂದ 4 ಕಿ.ಮೀ ದೂರದಲ್ಲಿ ರಸ್ತೆಗೆ ಬಂಡೆ ಉರುಳಿ ಬಿದ್ದು ,ಭಾಗಮಂಡಲ – ತಲಕಾವೇರಿ ಸಂಚಾರ ಅಸ್ತವ್ಯಸ್ತವಾಗಿದೆ.

- Advertisement -

ಗಾಳಿ ಮಳೆಗೆ ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ವಿದ್ಯುತ್ ಕಂಬಗಳು ಸಹ ನೆಲಕ್ಕೆ ಉರುಳಿ ಬಿದ್ದಿದ್ದು, ಸುತ್ತಮುತ್ತಲಿನ  ಗ್ರಾಮಗಳಲ್ಲಿ ರಾತ್ರಿಯಿಂದಲೇ ವಿದ್ಯುತ್ ಕಡಿತಗೊಂಡಿದೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮೊಣ್ಣಂಗೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮಣ್ಣು ಕುಸಿತವುಂಟಾಗಿದ್ದು,  2ನೇ ಮೊಣ್ಣಂಗೇರಿ – ರಾಮಕೊಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ  ಕೂಡ ಬಿರುಕು ಬಿಟ್ಟಿದೆ.

- Advertisement -

ನಿರಂತರ ಮಳೆಯಿಂದಾಗಿ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಿದೆ. ನಾಪೋಕ್ಲು- ಭಾಗಂಡಲ, ಮಡಿಕೇರಿ – ಭಾಗಮಂಡಲ ರಸ್ತೆಯೂ ಮುಳುಗಡೆಯಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕುಶಾಲನಗರ ಸೇರಿದಂತೆ ಕಾವೇರಿ ನದಿ ಪಾತ್ರದ ಗ್ರಾಮಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವುದರಿಂದ ಪ್ರವಾಹದ ಆತಂಕ ಎದುರಾಗಿದೆ.

Join Whatsapp