ಸರಕಾರ ಮೊಂಡುವಾದವನ್ನು ಬಿಟ್ಟು ಸಾರಿಗೆ ನೌಕರರ ಸಂಕಷ್ಟಗಳಿಗೆ ಕಿವಿಗೊಡಲಿ : ಕೋಡಿಹಳ್ಳಿ ಚಂದ್ರಶೇಖರ್

Prasthutha|

►ಅಂತ್ಯ ಕಾಣದ ಸಾರಿಗೆ ನೌಕರರ ಮುಷ್ಕರ

- Advertisement -

ಬೆಂಗಳೂರು: ಸರಕಾರ ತನ್ನ ಮೊಂಡುವಾದವನ್ನು ಬಿಟ್ಟು ಸಾರಿಗೆ ನೌಕರರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಅನಿರ್ದಿಷ್ಟಾವದಿ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಸಂಘಟನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

6ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಮುಷ್ಕರಕ್ಕೆ ಮೂರು ದಿನವಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ 6ನೇ ವೇತನ ಆಯೋಗ ಸಾಧ್ಯವಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಮುಖ್ಯಮಂತ್ರಿ ಸಾಧ್ಯವಿಲ್ಲ ಎಂದು ಹೇಳುವುದಕ್ಕೆ ಸರಿಯಾದ ವೈಜ್ಞಾನಿಕ ಕಾರಣವನ್ನು ನೀಡಬೇಕು. ಇಷ್ಟೇ ಕೊಡುತ್ತೇವೆ ಎನ್ನುವುದು ಸರಿಯಲ್ಲ. ನೌಕರರ ಬೇಡಿಕೆಯನ್ನು ವೈಜ್ಞಾನಿಕವಾಗಿ ಪರಿಶೀಲನೆ ಮಾಡಿ, ತರ್ಕಬದ್ಧವಾಗಿ ಚರ್ಚೆ ಮಾಡಿ. ಕಾರ್ಮಿಕರನ್ನೂ ಕರೆದು ಅಭಿಪ್ರಾಯವನ್ನು ಪಡೆಯಿರಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ‌.‌

- Advertisement -

ಒಂದು ಕಡೆಯ ಅಭಿಪ್ರಾಯಗಳನ್ನು ಮಾತ್ರ ಆಲಿಸಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಕಾರ್ಮಿಕರ ಮಾತುಗಳನ್ನೂ ಕೇಳಲು ಮುಖ್ಯಮಂತ್ರಿಗಳು ಮುಂದಾಗಬೇಕೆಂದು ಅವರು ಮನವಿ ಮಾಡಿದ್ದಾರೆ‌.

Join Whatsapp