ಕೋಲಾರ: ದಲಿತ ಯುವಕನ ಆತ್ಮಹತ್ಯೆ| ಓರ್ವನ ಬಂಧನ

Prasthutha|

ನಂಗಲಿ (ಕೋಲಾರ ಜಿಲ್ಲೆ): ದಲಿತ ಯುವಕ ಉದಯ್ ಕಿರಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ  ಮುನಿವೆಂಕಟಪ್ಪ ಎಂಬಾತನನ್ನು ನಂಗಲಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

- Advertisement -

ತಲೆಮರೆಸಿಕೊಂಡಿರುವ ಪೆತ್ತಾಂಡ್ಲಹಳ್ಳಿ ಗ್ರಾಮದ ಉಳಿದ ಆರೋಪಿಗಳಾದ ರಾಜು, ಶಿವರಾಜ್ ಹಾಗೂ ಗೋಪಾಲಕೃಷ್ಣಪ್ಪ ಅವರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. 

ಬೈಕ್ ಓವರ್ ಟೇಕ್ ಮಾಡಿದ್ದಾನೆ ಎಂದು ಆರೋಪಿಸಿ ಪರಿಶಿಷ್ಟ ಜಾತಿಯ(ಎಸ್.ಸಿ) ಉದಯ್ ಕಿರಣ್ ಎಂಬಾತನನ್ನು ಮರಕ್ಕೆ ಕಟ್ಟಿ ಥಳಿಸಿದ್ದು, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದ.

- Advertisement -

ದೌರ್ಜನ್ಯವೆಸಗಿದ ಆರೋಪದಲ್ಲಿ ಒಕ್ಕಲಿಗ ಸಮುದಾಯದ ಪೆತ್ತಾಂಡ್ಲಹಳ್ಳಿಯ ರಾಜು, ಶಿವರಾಜ್, ಗೋಪಾಲಕೃಷ್ಣಪ್ಪ ಹಾಗೂ ಮುನಿವೆಂಕಟಪ್ಪ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp
Exit mobile version