ಕೋಲಾರ: ದಲಿತ ಕುಟುಂಬದ ಮೇಲೆ ದೌರ್ಜನ್ಯ ಪ್ರಕರಣ: ಕುಟುಂಬಸ್ಥರಿಗೆ ರಾಹುಲ್ ಸಾಂತ್ವನ

Prasthutha|

ಕೋಲಾರ: ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರನ್ನು ಮುಟ್ಟಿದ ಎಂಬ ಕಾರಣಕ್ಕೆ ದೌರ್ಜನ್ಯಕ್ಕೊಳಗಾದ ಕುಟುಂಬಸ್ಥರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾದರು.

- Advertisement -


ತುಮಕೂರಿನಲ್ಲಿ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ದೌರ್ಜನ್ಯಕ್ಕೊಳಗಾದ ಕುಟುಂಬಸ್ಥರಿಗೆ ಕರೆಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.


ಬಳಿಕ ಕುಟುಂಬಸ್ಥರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಸದಾ ನಿಮ್ಮೊಂದಿಗೆ ಇದೆ. ನಿಮಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

- Advertisement -


ಕೋಲಾರ ಜಿಲ್ಲೆಯ ಹುಳ್ಳೇರಹಳ್ಳಿ ಗ್ರಾಮದಲ್ಲಿ ದೇವಾಲಯವೊಂದನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಉತ್ಸವದ ವೇಳೆ ದಲಿತ ಕುಟುಂಬಕ್ಕೆ ಸೇರಿದ ಚೇತನ್ ಎಂಬ ಯುವಕ ದೇವರನ್ನು ಮುಟ್ಟಿದ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಆ ಬಾಲಕನ ಕುಟುಂಬಕ್ಕೆ 60 ಸಾವಿರ ರೂ ದಂಡ ಕಟ್ಟುವಂತೆ ಮೇಲ್ಜಾತಿಯ ಕೆಲವರು ಬೆದರಿಕೆ ಹಾಕಿದ್ದರು.

Join Whatsapp