ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್ ಕ್ರೂರ ಪ್ರಾಣಿಯ ಸ್ವಭಾವದವನು, ಪಶ್ಚಾತಾಪವೂ ಇಲ್ಲ: ವೈದ್ಯರು

Prasthutha|

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಆರೋಪಿ ಸಂಜಯ್ ರಾಯ್ ನದ್ದು ಕ್ರೂರ ಪ್ರಾಣಿಯ ಮನಸ್ಥಿತಿ, ಆತನಿಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

- Advertisement -


ಆತ ನಿತ್ಯವೂ ತನ್ನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಣೆ ಮಾಡುತ್ತಿರುತ್ತಿದ್ದ, ಪ್ರಾಣಿಯ ಪ್ರವೃತ್ತಿಯನ್ನು ಹೊಂದಿದ್ದ, ಆತನಿಗೆ ತಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಸಿಬಿಐ ಆಗಸ್ಟ್ 18ರಂದು ಸಂಜಯ್ ರಾಯ್ ಮನಸ್ಥಿತಿಯನ್ನು ತಿಳಿದುಕೊಳ್ಳಲು ಸಿಎಫ್ ಎಸ್ ಎಲ್ ತಜ್ಞರಿಗೆ ಹೇಳಿದ್ದರು. ಆಗಸ್ಟ್ 9 ರಂದು ಸರ್ಕಾರಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯರ ಶವ ಪತ್ತೆಯಾದ ಮರುದಿನ ಬಂಧಿಸಲಾಗಿತ್ತು.

- Advertisement -


ಆ ವ್ಯಕ್ತಿಗೆ ಯಾವುದೇ ಅಪರಾಧ ಪ್ರಜ್ಞೆ ಇಲ್ಲ, ಅಲ್ಲಿ ಏನಾಗಿದೆ ಎಂಬುದನ್ನು ತಡವರಿಸದೆ ಪ್ರತಿ ಪ್ರತಿ ನಿಮಿಷದ ಘಟನೆಯನ್ನು ವಿವರಿಸಿದ್ದಾನೆ. ಅವನಿಗೆ ಪಶ್ಚಾತಾಪವಾದಂತೆ ತೋರುತ್ತಿಲ್ಲ ಎಂದಿದ್ದಾರೆ.
ಕೋಲ್ಕತ್ತಾ ಹೈಕೋರ್ಟ್ ನಿಂದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು, ಸ್ಥಳೀಯ ಪೊಲೀಸರು ರಾಯ್ ಅವರಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ನಲ್ಲಿ ಅಶ್ಲೀಲ ವಿಡಿಯೋಗಳಿರುವ ಬಗ್ಗೆ ಮಾಹಿತಿ ನೀಡಿದ್ದರು.



Join Whatsapp