ಸಚಿವ ಸ್ಥಾನದ ಮೇಲೆ ಶಾಸಕ ಎನ್. ಮಹೇಶ್ ಕಣ್ಣು | ‘ಕಮಲ’ ಮುಡಿಯಲು ಮುಂದಾದ ಕೊಳ್ಳೇಗಾಲ MLA

Prasthutha|

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಕೊನೆಗೂ ಬಿಜೆಪಿ ಸೇರ್ಪಡೆಗೊಳ್ಳುವುದನ್ನು ಖಚಿತಪಡಿಸಿದ್ದಾರೆ. ಇಂದು ಗುಂಡ್ಲುಪೇಟೆಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಎನ್. ಮಹೇಶ್ ಯಾವುದೇ ಷರತ್ತುಗಳಿಲ್ಲದೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹೇಶ್, ಬಿಜೆಪಿ ಸೇರ್ಪಡೆ ಬಗ್ಗೆ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ಪಕ್ಷಕ್ಕೆ ಬರಮಾಡಿಕೊಳ್ಳುವುದಾಗಿ ಬಿಎಸ್ ವೈ ತಿಳಿಸಿದ್ದಾಗಿ ಹೇಳಿದ್ದಾರೆ.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಮಹೇಶ್ ಅವರು ಕೂಡಾ ಆಕಾಂಕ್ಷಿಯಾಗಿದ್ದಾರೆ. ಆದರೆ, ಅವರು ಪಕ್ಷ ಸೇರ್ಪಡೆಗೊಳ್ಳದ ಹೊರತು ಇದು ಅಸಾಧ್ಯ. ಹಾಗಾಗಿ ಶಾಸಕ ಮಹೇಶ್ ಅವರು ಬಿಜೆಪಿ ಸೇರ್ಪಡೆಗೊಳ್ಳುವ ನಿರ್ಧಾರ ಮಾಡಿದ್ದಾಗಿ ಅವರ ಆಪ್ತ ಮೂಲಗಳು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದ ಎನ್. ಮಹೇಶ್ ಅವರ ಪಕ್ಷ ವಿರೋಧಿ ಚಟುವಟಿಕೆಗಾಗಿ ಪಕ್ಷದ ವರಿಷ್ಠೆ ಮಾಯಾವತಿ ಅವರು ಉಚ್ಛಾಟಿಸಿದ್ದರು.    

Join Whatsapp