ಎಸ್‌.ಡಿ.ಪಿ.ಐ ಜಿಲ್ಲಾ ನಾಯಕರ ಸಮ್ಮುಖದಲ್ಲಿ ಸಜೀಪನಡುವಿನಲ್ಲಿ ಕೊಣಾಜೆ ಬ್ಲಾಕ್ ಸಮಾಗಮ – 2023

Prasthutha|

ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನದ ಭಾಗವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್.ಡಿ.ಪಿ.ಐ. ಕೊಣಾಜೆ ಬ್ಲಾಕ್ ಸಮಿತಿಯ ಅಧೀನದಲ್ಲಿ ಬ್ಲಾಕ್ ಸಮಾಗಮ–2023 ಕಾರ್ಯಕ್ರಮವು ಎಸ್.ಡಿ.ಪಿ.ಐ. ಕೊಣಾಜೆ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ನವಾಝ್ ಸಜೀಪ ರವರ ಅಧ್ಯಕ್ಷತೆಯಲ್ಲಿ ಎಸ್.ಡಿ.ಪಿ.ಐ. ಸಜೀಪನಡು ಸಮಿತಿ ಕಛೇರಿಯಲ್ಲಿ ನಡೆಯಿತು.

- Advertisement -


ಮುಖ್ಯ ಅತಿಥಿಗಳಾಗಿ ಎಸ್‌.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜಮಾಲ್ ಜೋಕಟ್ಟೆ, ಜಿಲ್ಲಾ ಕೋಶಾಧಿಕಾರಿಯಾದ ಹನೀಫ್ ರಂತಡ್ಕ , ಎಸ್‌.ಡಿ.ಪಿ.ಐ. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಉಬೈದ್ ಅಮ್ಮೆಂಬಳ ಆಗಮಿಸಿದ್ದರು.

ಎಸ್.ಡಿ.ಪಿ.ಐ. ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ರಂತಡ್ಕ ಪ್ರಸ್ತಾವಿಕ ಮಾತನಾಡಿ ಕೊಣಾಜೆ ಬ್ಲಾಕ್ ಸಮಿತಿಯ ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಮತ್ತು ಪ್ರಸಕ್ತ ಸನ್ನಿವೇಶದಲ್ಲಿ ಅಗತ್ಯವಿರುವ ನಾಯಕತ್ವದ ಗುಣವಿಶೇಷತೆಗಳ ಬಗ್ಗೆ ಹೇಳಿದರು.

- Advertisement -

ಸಭೆಯನ್ನು ಉದ್ದೇಶಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆಯವರು ಇಂದಿನ ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯ ಬೆಳವಣಿಗೆಗಳು ಮತ್ತು ನಮ್ಮ ಬಾದ್ಯತೆಗಳು ಎಂಬ ವಿಚಾರದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌.ಡಿ.ಪಿ.ಐ ಸಜೀಪನಡು ಗ್ರಾಮ ಸಮಿತಿ ಅಧ್ಯಕ್ಷ ನೌಶಾದ್, ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ SN ಇಕ್ಬಾಲ್, ಕೊಣಾಜೆ ಬ್ಲಾಕ್ ಕಾರ್ಯದರ್ಶಿ ಶಫೀಕ್ ಅರ್ಕಾಣ ಉಪಸ್ಥಿತರಿದ್ದರು.

ಎಸ್.ಡಿ.ಪಿ. ಕೊಣಾಜೆ ಬ್ಲಾಕ್ ಸಮಿತಿ ಅಧ್ಯಕ್ಷರಾದ ನವಾಝ್ ಸಜೀಪ ಸ್ವಾಗತಿಸಿ, ಶಫೀಕ್ ಆರ್ಕಾಣ, ಧನ್ಯವಾದಗೈದರು.

Join Whatsapp