ಕೊಣಾಜೆ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

Prasthutha|

ಉಳ್ಳಾಲ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಜಗನ್ನಾಥ (44) ಕರ್ತವ್ಯ ನಿರತರಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

ಇಂದು ಬೆಳಗ್ಗೆ ಠಾಣೆಗೆ ಆಗಮಿಸಿದ್ದ ಜಗನ್ನಾಥ ಅವರಿಗೆ ಸ್ವಲ್ಪ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Join Whatsapp