ಕೊಪ್ಪಳ: ಪತಿಗೆ ಥಳಿಸಿ ಪತ್ನಿಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ್ದ ಗ್ಯಾಂಗ್ ಅರೆಸ್ಟ್

Prasthutha|

ಕೊಪ್ಪಳ: ವ್ಯಕ್ತಿಯನ್ನು ಥಳಿಸಿ, ಆತನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಫೆಬ್ರವರಿ 8 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಬಸ್ ನಿಲ್ದಾಣ ಬಳಿಯ ಉದ್ಯಾನವನದಲ್ಲಿ ಘಟನೆ ನಡೆದಿತ್ತು. ಸಂತ್ರಸ್ತೆ ಮತ್ತು ಆಕೆಯ ಪತಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಬಸ್ ನಿಲ್ದಾಣದಲ್ಲಿ ಜಗಳವಾಡುತ್ತಿದ್ದಾಗ ಆರು ಜನ ಮಧ್ಯಪ್ರವೇಶಿಸಿ ಸಂತ್ರಸ್ತೆಯ ಪತಿಗೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಲಿಂಗರಾಜ ಎಂಬಾತ ಮಹಿಳೆಯನ್ನು ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಗಂಗಾವತಿ ಪೊಲೀಸ್ ಉಪಾಧೀಕ್ಷಕ ಸಿದ್ದಲಿಂಗಪ್ಪಗೌಡ ಪಾಟೀಲ್ ಅವರು ಹೇಳಿದ್ದಾರೆ.

- Advertisement -

ಅತ್ಯಾಚಾರದ ನಂತರ, ಗ್ಯಾಂಗ್ ಸಂತ್ರಸ್ತೆಯನ್ನು ನಿಂದಿಸಿ ಕಿರುಕುಳ ನೀಡಿದೆ” ಎಂದು ಡಿಸಿಪಿ ತಿಳಿಸಿದ್ದಾರೆ.

ಲಿಂಗರಾಜ, ಮೌಲಾ ಹುಸೇನ್, ಶಿವಕುಮಾರ್ ಸ್ವಾಮಿ, ಪ್ರಶಾಂತ, ಮಹೇಶ್ ಮತ್ತು ಮಾದೇಶ್ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Join Whatsapp