ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ನಿಯಮ ಸಡಿಲಿಕೆಗೆ ಕೋಟ ಮನವಿ

Prasthutha|

ಮಂಗಳೂರು : ಧಾರ್ಮಿಕ ಕಾರ್ಯಕ್ರಮದ ನಿಷೇಧದ ಹಿನ್ನೆಲೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಧಾರ್ಮಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೋವಿಡ್-19 ಗೈಡ್‌ಲೈನ್ ವ್ಯಾಪ್ತಿಯೊಳಗೆ ಧಾರ್ಮಿಕ ಕಾರ್ಯಕ್ರಮಗಳ ನಿಯಮಗಳನ್ನು ಸಡಿಲಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

- Advertisement -

 ಈಗಾಗಲೇ ನೂತನ ಸುತ್ತೋಲೆಯಂತೆ ಉಳಿದೆಲ್ಲ ಸಭೆ-ಸಮಾರಂಭಗಳಿಗೆ ಸೀಮಿತ ಸಂಖ್ಯೆಯಲ್ಲಿ ಅವಕಾಶ ನೀಡಲಾಗುತ್ತಿದೆ. ಎಲ್ಲಾ ಕಾರ್ಯಕ್ರಮಗಳಿಗೆ ಕೋವಿಡ್-19 ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಈ ಕ್ರಮ ಸ್ವಾಗತಾರ್ಹ.ಆದರೆ, ಧಾರ್ಮಿಕ ಕಾರ್ಯಕ್ರಮದ ನಿಷೇಧ ಮಾಡಿದ ಹಿನ್ನೆಲೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಧಾರ್ಮಿಕ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಅನೇಕ ಕಡೆ ಧಾರ್ಮಿಕ ಚೌಕಟ್ಟಿನ ಯಕ್ಷಗಾನ ಹರಕೆಯ ಬಯಲಾಟಗಳು, ನೇಮೋತ್ಸವ, ದೇವತಾ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಇತ್ಯಾದಿಗಳಿಗೆ ಸಮಯ ನಿಗದಿಪಡಿಸಿಕೊಂಡಿದ್ದು ಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ.

ನೂತನ ನಿಯಮದಿಂದ ಸಾಂಕೇತಿಕವಾಗಿ ಕಾರ್ಯಕ್ರಮ ಮಾಡಲೂ ತೊಂದರೆಯಾಗುತ್ತಿದೆ. ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಬಹಳ ಸಂಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್-19 ನಿಯಮಗಳ ವ್ಯಾಪ್ತಿಯೊಳಗೆ ಇತರ ಕಾರ್ಯಕ್ರಮಗಳಿಗೆ ಕೊಟ್ಟಿರುವಂತೆ ನಿಯಮದಲ್ಲಿ ಸಡಿಲಿಕೆಯನ್ನು ಧಾರ್ಮಿಕ ಕಾರ್ಯಕ್ರಮಗಳಿಗೂ ಕೊಡುವ ಮೂಲಕ ಭಕ್ತಾದಿಗಳ ಸಂಕಷ್ಟ ಪರಿಹಾರ ಮಾಡಬೇಕೆಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಯವರಿಗೆ ಅವರು ಮನವಿ ಮಾಡಿದ್ದಾರೆ.

Join Whatsapp