ವಿಧಾನಪರಿಷತ್ ನಲ್ಲಿ ಸಭಾಪತಿಯವರನ್ನು ಎಳೆದಾಡಿದ ಘಟನೆ | ಮೂರೂ ಪಕ್ಷಗಳೂ ಕಾರಣ : ಕೋಟ ಶ್ರೀನಿವಾಸ ಪೂಜಾರಿ

Prasthutha|

ಮೈಸೂರು : ವಿಧಾನಪರಿಷತ್ ನಲ್ಲಿ ನಿನ್ನೆ ನಡೆದ ಘಟನೆಗೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮೂರು ಪಕ್ಷಗಳೂ ಕಾರಣ ಎಂದು ಸಚಿವ, ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.  

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದ ದೇವಾಲಯದಲ್ಲಿ ನಿನ್ನೆ ನಡೆದ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಇಂತಹ ಘಟನೆ ನಡೆಯಬಾರದಿತ್ತು ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಡಿ.ಎಚ್. ಶಂಕರಮೂರ್ತಿ ಸಭಾಪತಿಗಳಾಗಿದ್ದಾಗ ಕಾಂಗ್ರೆಸ್ ನವರು ಅವಿಶ್ವಾಸ ಮತಕ್ಕೆ ಹಾಕಿದ್ದರು. ಈಗಲೂ ಅಂತಹುದಕ್ಕೆ ಅವಕಾಶ ನೀಡಬಹುದಿತ್ತು. ಆದರೆ, ಕಾಂಗ್ರೆಸ್ ನವರು ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.  

- Advertisement -

ಸಭಾಪತಿ ಹುದ್ದೆಯನ್ನು ಯಾವುದೇ ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳಬಾರದು. ಈ ಪ್ರಕರಣ ಸುಖಾಂತ್ಯವಾಗುವ ವಿಶ್ವಾಸವಿದೆ. ಸದನದ ಬಗ್ಗೆ ಹೆಚ್ಚು ಮಾತನಾಡಿದರೆ ಅದಕ್ಕೆ ಅಗೌರವ ಮಾಡಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

Join Whatsapp