5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಕೆಪಿಸಿಸಿ ಆಗ್ರಹ

Prasthutha|

ಪುತ್ತೂರು: ಕರ್ನಾಟಕ ಸರಕಾರವು ಈ ವರ್ಷದಿಂದ ಆರಂಭಿಸಲು ಉದ್ದೇಶಿಸಲಾದ, ಐದು ಮತ್ತು ಎಂಟನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಸರಕಾರವನ್ನು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ, ವಿದ್ಯಾರ್ಥಿಗಳ ಮೇಲೆ ಈ ಹೊರೆಯನ್ನು ಹಾಕಿ ಅವರ ಮಾನಸಿಕ ಸ್ಥೈರ್ಯವನ್ನು ಹೊಸಕಿ ಹಾಕುವ ಪ್ರಯತ್ನ ಇದಾಗಿದೆ.

ಇದರಿಂದ ಮಕ್ಕಳು ಸೇರಿ ಅವರ ಹೆತ್ತವರು ತೀವ್ರ ಚಿಂತೆಗೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಸರಕಾರವು ಮಕ್ಕಳ ಮತ್ತು ಹೆತ್ತವರ ಹಿತದೃಷ್ಟಿಯಿಂದ ಈ ವರ್ಷ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಮಕ್ಕಳಲ್ಲಿರುವ ಗೊಂದಲವನ್ನು ಬಗೆಹರಿಸಬೇಕಾಗಿ ಕೇಳಿಕೊಂಡಿದ್ದಾರೆ.

Join Whatsapp