Home ಟಾಪ್ ಸುದ್ದಿಗಳು ಚಿಕ್ಕಮಗಳೂರು | KSRTC ಐರಾವತ ಬಸ್ ಗೆ ಬೆಂಕಿ: ಪ್ರಯಾಣಿಕರು ಪಾರು

ಚಿಕ್ಕಮಗಳೂರು | KSRTC ಐರಾವತ ಬಸ್ ಗೆ ಬೆಂಕಿ: ಪ್ರಯಾಣಿಕರು ಪಾರು

ಚಿಕ್ಕಮಗಳೂರು: ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್ ನಲ್ಲಿ ಕೆಎಸ್ ಆರ್ ಟಿಸಿಯ ಐರಾವತ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.


ಬಸ್ ಚಾಲಕ ಜಾಗರೂಕತೆ ವಹಿಸಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟಿದ್ದ ಕೆಎ 01 ಎಫ್ 9077 ಸಂಖ್ಯೆಯ ಬಸ್‌ ನಲ್ಲಿ ಸಿಬ್ಬಂದಿ ಸೇರಿ ಒಟ್ಟು 40 ಜನ ಪ್ರಯಾಣಿಸುತ್ತಿದ್ದರು. ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಚಾಲಕ ಬಸ್‌ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬೆಂಕಿಯನ್ನು ನಂದಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version