Home ಟಾಪ್ ಸುದ್ದಿಗಳು KSRTC ಬಸ್‌ ಅಪಘಾತ : ಇಬ್ಬರು ಸಾವು, 10 ಮಂದಿಗೆ ಗಾಯ

KSRTC ಬಸ್‌ ಅಪಘಾತ : ಇಬ್ಬರು ಸಾವು, 10 ಮಂದಿಗೆ ಗಾಯ

ತುಮಕೂರು : ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ನಡೆದಿದೆ.

ರಸ್ತೆ ಬದಿ ಇದ್ದ ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟಿದ್ದು, ರೈತ ಗೋಪಾಲ ನಾಯ್ಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ, ಕೊನೆಗೆ ಮೃತಪಟ್ಟಿದ್ದಾರೆ. ಇನ್ನು ನಿರ್ವಾಹಕ ಸೇರಿ 10 ಮಂದಿಗೆ ಗಾಯಗಳಾಗಿವೆ.

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಅಪಘಾತವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version