Home ಟಾಪ್ ಸುದ್ದಿಗಳು KSRTC ಬಸ್-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

KSRTC ಬಸ್-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ತುಮಕೂರು: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರುನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ಸೋಮವಾರ ಮುಂಜಾನೆ ನಡೆದಿದೆ.


ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Join Whatsapp
Exit mobile version