Home ಟಾಪ್ ಸುದ್ದಿಗಳು 2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಮೂವರು ಸಾವು

2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಮೂವರು ಸಾವು

ಚಿತ್ರದುರ್ಗ: ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ಸೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕಡೇಶ್ವರ ದೇಗುಲ ಬಳಿ ನಡೆದಿದೆ.

ಹೊಳಲ್ಕೆರೆ ತಾಲೂಕಿನ ಮಾಳೇನಹಳ್ಳಿ ಗ್ರಾಮದ ಮನು(28), ಸತೀಶ(30), ರಂಗಾಪುರ ಗ್ರಾಮದ ಚಂದ್ರು(32) ಮೃತಪಟ್ಟವರು.

ಬೈಕ್ ಗಳ ಮೇಲೆ ಹರಿದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ, ಪರಿಶೀಲನೆ ಮಾಡಿದ್ದರು ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version