Home ಟಾಪ್ ಸುದ್ದಿಗಳು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್: ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್: ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಹಾಸನ: ರಸ್ತೆ ಬದಿ ನಿಂತಿದ್ದ ರಿಕ್ಷಾಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.


ಇರುಮುಡಿ ಮೂರ್ತಿ (54) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ರಿಕ್ಷಾ ಚಾಲಕ ಮತ್ತು ಮತ್ತೋರ್ವ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಚಿಂತಾಜನಕವಾಗಿದೆ.


ಹಾಸನ – ಬೆಂಗಳೂರು ನಾನ್ ಸ್ಟಾಪ್ ಬಸ್ ಬೆಂಗಳೂರಿಂದ ಹಾಸನಕ್ಕೆ ಬರುತ್ತಿತ್ತು. ಈ ವೇಳೆ, ಹಾಸನದಲ್ಲಿ ರಸ್ತೆ ಬದಿ ನಿಲ್ಲಿಸಿದ ಆಟೋಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿ, ಚಾಲಕ ಆನಂದ್ ಮತ್ತು ಪ್ರಯಾಣಿಕ ಬೆಟ್ಟೇಗೌಡ ಗಂಭೀರ ಗಾಯಗೊಂಡಿದ್ದಾರೆ.

Join Whatsapp
Exit mobile version