ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ: ದಂಪತಿ ಸಾವು, 20 ಮಂದಿಗೆ ಗಾಯ

Prasthutha|

ಬೆಂಗಳೂರು: ಕೆಎಸ್ ​​ಆರ್​​ ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ನಿನ್ನೆ ಮಧ್ಯರಾತ್ರಿ ನಗರದ ಹೊರವಲಯದ ಹೊಸಕೋಟೆಯ ಮೈಲಾಪುರ ಗೇಟ್ ಬಳಿ ನಡೆದಿದೆ.

- Advertisement -

ಚಿತ್ತೂರು ಮೂಲದ ಬಾಲಮುರುಗನ್ (45) ಹಾಗೂ ಸೆಲ್ವಿ (36)ಮೃತ ದಂಪತಿಯಾಗಿದ್ದು, ಇವರ ನಾಲ್ಕು ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗೆ ಕೆಎಸ್​​ ಆರ್ ​​ಟಿಸಿ ಬಸ್​​ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ 20 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ.

- Advertisement -

ಆಂಧ್ರ ಪ್ರದೇಶದ ಬಲಿಜಖಂಡ್ರಿಗದಿಂದ ರಾತ್ರಿ 9:30ಕ್ಕೆ ಬೆಂಗಳೂರಿಗೆ ಬರುತ್ತಿದ್ದ ಬಸ್ ತಡ ರಾತ್ರಿ 1:45ರ ಸಮಯಕ್ಕೆ ರಾಷ್ಟ್ರೀಯ ಹೆದ್ದಾರಿ ಹೊಸಕೋಟೆ ಸಮೀಪದ ಮೈಲಾಪುರ ಗೇಟ್ ಬಳಿ ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತ ಸಂಭವಿಸಿದ ತಕ್ಷಣ ಚಾಲಕ ಬಸ್​​ ಬಿಟ್ಟು ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಎಸ್​​ ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೊಸಕೋಟೆ ಠಾಣೆ ಇನ್ಸ್​​ ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

Join Whatsapp