ಪುತ್ತೂರು | KSRTC ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

Prasthutha|

ಪುತ್ತೂರು : KSRTC ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಸಂಬಂಧ ಪುತ್ತೂರು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ಸುರತ್ಕಲ್ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.

ಜ.13ರಂದು ಸಂಜೆ ಇಲ್ಲಿನ KSRTC ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಕರ್ತವ್ಯದಲ್ಲಿರುವ ವೇಳೆ ಪ್ರಯಾಣಿಕನೋರ್ವ ಕಾಂಞಂಗಾಡಿಗೆ ಹೋಗುವ ಕೇರಳದ ಬಸ್ ಮಾಹಿತಿ ಕೇಳಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Join Whatsapp