ಸುದ್ದಿಗೋಷ್ಠಿ ವೇಳೆ ಮೂಗಿನಿಂದ ರಕ್ತ ಸೋರಿಕೆ: ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

Prasthutha|

- Advertisement -

ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿಯವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಡಾ ಹಗರಣದ ಕುರಿತಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೋರಾಟದ ರೂಪುರೇಷೆ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಮಾತನಾಡುತ್ತಿದ್ದರು. ಈ ವೇಳೆ ಅವರ ಮೂಗಿನಿಂದ ಏಕಾಏಕಿ ರಕ್ತ ಸುರಿದಿದೆ. ಮೊದಲು ತಮ್ಮ ಬಳಿ ಇರುವ ಟವೆಲ್‌ನಿಂದ ಹೆಚ್‌ಡಿಕೆ ರಕ್ತ ಒರೆಸಿಕೊಂಡಿದ್ದಾರೆ. ಆದರೆ ಮತ್ತೆ ಜಾಸ್ತಿ ರಕ್ತ ಬಂದು, ಅವರ ಬಿಳಿ ಶರ್ಟ್‌ಗೂ ಮೆತ್ತಿಕೊಂಡಿದೆ. ಈ ವೇಳೆ ಜೊತೆಯಲ್ಲಿದ್ದ
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅಲ್ಲಿದ್ದವರೆಲ್ಲ ಗಾಬರಿಯಾಗಿದ್ದಾರೆ. ಬಳಿಕ ಕುಮಾರಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp