ದಾಖಲೆ ಕೊಡ್ತೀನಿ ತನಿಖೆ ಮಾಡೋ ಧಮ್ ಇದ್ಯಾ: ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್

Prasthutha|

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಮಿಷನ್ ಆರೋಪ ಕುರಿತು ದಾಖಲೆ ಕೊಟ್ಟು ಆರೋಪ ಮಾಡಲಿ ಎಂದು ಉಪ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ದಾಖಲೆ ಕೊಡುತ್ತೇನೆ ತನಿಕೆ ಮಾಡೋ ಧಮ್ ನಿಮಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

- Advertisement -


ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ದಾಖಲೆ ಕೊಡುತ್ತೇನೆ ತನಿಕೆ ಮಾಡೋ ಧಮ್ ನಿಮಗೆ ಇದೆಯಾ?, ನನ್ನ ಕಾಲದಲ್ಲಿ ನಡೆದ ವರ್ಗಾವಣೆ ಬಗ್ಗೆಯೂ ತನಿಖೆ ಮಾಡಲಿ, ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಿಗೆ ಕಾಂಗ್ರೆಸ್ ನವರು ಹಗಲು ದರೋಡೆಗೆ ಇಳಿದ್ದಾರೆ. ವರ್ಗಾವಣೆ ದಂಧೆಗೆ ಎಷ್ಟು ಹಣ ನಿಗದಿ ಮಾಡಿದ್ದೀರೆಂದು ಗೊತ್ತಿದೆ. ಟೈಮ್ ಬಂದಾಗ ದಾಖಲೆ ಕೊಡುವೆ, ಸದನದಲ್ಲೇ ದಾಖಲೆ ನೀಡುವೆ, ನಾನು ನೀಡುವ ದಾಖಲೆ ನೋಡಿ ಆ ಸಚಿವರನ್ನ ಸಂಪುಟದಿಂದ ವಜಾ ಮಾಡುತ್ತೀರಾ ಎಂದು ಸವಾಲು ಹಾಕಿದ್ದಾರೆ.


ಇನ್ನು ಸಿಎಂ ವಿಚಾರ ‘ಕೆಲವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಆದರೆ ಈಗಾಗಲೇ ಡಿ.ಕೆ ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ. ನೋಡೋಣ ಎಷ್ಟು ದಿನ ಇರುತ್ತೆ ಈ ಸರ್ಕಾರ ಎಂದು ಟಾಂಗ್ ಕೊಟ್ಟಿದ್ದಾರೆ.

Join Whatsapp