ಲಾಭ ಇಲ್ಲದೇ ಕುಮಾರಸ್ವಾಮಿ ಯಾವುದೇ ಕೆಲಸ ಮಾಡಲ್ಲ: ಜಮೀರ್ ಅಹ್ಮದ್ ವಾಗ್ದಾಳಿ

Prasthutha|

ಬೆಂಗಳೂರು: ಲಾಭ ಇಲ್ಲದೇ ಕುಮಾರಸ್ವಾಮಿ ಯಾವುದೇ ಕೆಲಸ ಮಾಡಲ್ಲ. ಎರಡು ಕ್ಷೇತ್ರದಲ್ಲಿ ಎಚ್ ಡಿಕೆ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ್ದು. ಬಿಜೆಪಿಗೆ ಲಾಭ ಮಾಡಿಕೊಡಲು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

- Advertisement -

ಅಲ್ಪ ಸಂಖ್ಯಾತರಿಗೆ ಸಿದ್ದರಾಮಯ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಮಾಡಿದಷ್ಟು ಒಳ್ಳೇ ಕೆಲಸ ಯಾರು ಮಾಡಲಿಲ್ಲ. ದೇವೇಗೌಡರಿಗೆ ಈಗಲೂ ಅಲ್ಪ ಅಸಂಖ್ಯಾತರ ಬಗ್ಗೆ ಕಾಳಜಿ ಇದೆ. ಅದರಲ್ಲಿ ಒಂದು ಪರ್ಸೆಂಟ್ ಸಹ ಕುಮಾರಸ್ವಾಮಿಗೆ ಕಾಳಜಿ ಇಲ್ಲ ಎಂದು ಜಮೀರ್ ಹೇಳಿದ್ದಾರೆ.

2004ರಿಂದ ಕುಮಾರಸ್ವಾಮಿ ಮುಸ್ಲಿಮರಿಗೆ ಏನು ಮಾಡಿದ್ದಾರೆ? ಜಾಫರ್ ಶರೀಫ್ ಮೊಮ್ಮಗನ ಮೇಲೆ ಅಷ್ಟು ಪ್ರೀತಿ ಇದ್ದರೆ, ಮಂಡ್ಯದಲ್ಲಿ ಶರೀಫ್ ಮಗನಿಗೆ ಟಿಕೆಟ್ ಕೊಡಬೆಕಿತ್ತು. ಹಾಸನ, ರಾಮನಗರದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶವಿತ್ತು. ಗೆಲ್ಲುವ ಅವಕಾಶವಿದ್ದರೂ ಯಾಕೆ ಕುಮಾರಸ್ವಾಮಿ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

Join Whatsapp