ರೇವಣ್ಣ ಬಂಧನವಾಗುತ್ತಿದ್ದಂತೆ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ ಕುಮಾರಸ್ವಾಮಿ

Prasthutha|

ಬೆಂಗಳೂರು: ಸಹೋದರ ಎಚ್‌. ಡಿ. ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸುತ್ತಿದ್ದಂತೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಅವರು ಖಾಸಗಿ ಹೊಟೇಲ್‌ನಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ.

- Advertisement -

ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಮಧ್ಯಾಹ್ನ ಆರಂಭವಾಗುತ್ತಿದ್ದಂತೆ ನಗರದ ಖಾಸಗಿ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ ಕುಮಾರಸ್ವಾಮಿ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ.

ಮಾಜಿ ಸಚಿವರಾದ ಜಿ.ಟಿ. ದೇವೇಗೌಡ, ಸಿ.ಎಸ್‌. ಪುಟ್ಟರಾಜು, ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರ ಕೆಲವು ಆಪ್ತರ ಜತೆಗೆ ಕುಮಾರಸ್ವಾಮಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

- Advertisement -

.

Join Whatsapp